Chief Editor
Manohar. R (Manu)
Photo Journalist
chitrataramanu@gmail.com
+91 9845549026
ಕೇಂದ್ರ ಸಚಿವ ಶ್ರೀಪ್ರಹ್ಲಾದ ಜೋಶಿ ಅವರಿಂದ ಬಿಡುಗಡೆಯಾಯಿತು "ದಾಸವರೇಣ್ಯ ಶ್ರೀ ವಿಜಯ ದಾಸರು" ಚಿತ್ರದ ಧ್ವನಿಸುರಳಿ
Posted date: 10 Wed, Jan 2024 11:20:19 PM
ತ್ರಿವಿಕ್ರಮ ಜೋಶಿ ಅವರು ಎಸ್ ಪಿ ಜೆ ಮೂವೀಸ್ ಲಾಂಛನದಲ್ಲಿ ನಿರ್ಮಾಣ ಮಾಡಿರುವ,  ಮಧುಸೂದನ್ ಹವಾಲ್ದಾರ್ ನಿರ್ದೇಶಿಸಿರುವ "ದಾಸವರೇಣ್ಯ ಶ್ರೀ ವಿಜಯದಾಸರು" ಚಿತ್ರದ ಧ್ವನಿ ಸುರುಳಿಯನ್ನು ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ ಬಿಡುಗಡೆ ಮಾಡಿದರು. ಪಂಡಿತ ಪೂಜ್ಯ ಶ್ರೀ ಸತ್ಯಧ್ಯಾನಾಚಾರ್ಯ ಕಟ್ಟಿ,  ಮಾಜಿ ಸಚಿವರಾದ ಶ್ರೀ ಮುರುಗೇಶ್ ನಿರಾಣಿ, ಮಾಜಿ ಶಾಸಕರಾದ ಶ್ರೀ ಬಸವನಗೌಡ, ಬಸವನಗುಡಿ ಶಾಸಕರಾದ ಶ್ರೀ ರವಿ ಸುಬ್ರಹ್ಮಣ್ಯ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಶ್ರೀ ಎನ್ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಶ್ರೀ ಉಮೇಶ್ ಬಣಕಾರ್, ಶ್ರೀ ಲಹರಿ ವೇಲು ಸೇರಿದಂತೆ ಅನೇಕ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ಶ್ರೀವೇದವ್ಯಾಸರು ರಚಿಸಿದ ವೇದಗಳು ಸಾಮಾನ್ಯ ಜನರಿಗೆ ಅರ್ಥವಾಗುವುದು ಕಷ್ಟ.  ಹರಿದಾಸರು ವೇದಗಳ ಸಾರವನ್ನು ಕನ್ನಡ ಭಾಷೆಯಲ್ಲಿ ಜನರಿಗೆ ಅರ್ಥವಾಗುವ ಹಾಗೆ ಹಾಡುಗಳ ಮೂಲಕ ನೀಡಿದ್ದಾರೆ‌‌. ಶ್ರೀಪುರಂದರದಾಸರ ನಂತರ ಬರುವ ಶ್ರೀವಿಜಯದಾಸರು 2800 ಕ್ಕೂ ಹೆಚ್ಚು ಸುಳಾದಿಗಳನ್ನು, ಸಾಕಷ್ಟು ದೇವರನಾಮ ಹಾಗೂ ಸುಳಾದಿಗಳನ್ನು ರಚಿಸಿದ್ದಾರೆ. ಭೃಗು ಋಷಿಗಳ ಅಂಶ ಸಂಭೂತರಾದ ಶ್ರೀವಿಜಯದಾಸರ ಕುರಿತಾದ ಈ ಚಿತ್ರವನ್ನು ಸ್ನೇಹಿತರಾದ ತ್ರಿವಿಕ್ರಮ ಜೋಶಿ ನಿರ್ಮಾಣ ಮಾಡಿದ್ದಾರೆ. ಹರಿದಾಸರ ಚಿತ್ರಗಳ ಹ್ಯಾಟ್ರಿಕ್ ನಿರ್ದೇಶಕ ಮಧುಸೂದನ್ ಹವಾಲ್ದಾರ್ ನಿರ್ದೇಶಿಸಿದ್ದಾರೆ‌‌. ವಿಜಯಕೃಷ್ಣ ಅವರ ಸಂಗೀತದಲ್ಲಿ ಮೂಡಿಬಂದಿರುವ ಹಾಡುಗಳು ಚೆನ್ನಾಗಿದೆ. ಚಿತ್ರ ಯಶಸ್ವಿಯಾಗಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾರೈಸಿದರು.

ಕನ್ನಡದಲ್ಲಿ ನವಕೋಟಿ ನಾರಾಯಣ, ಭಕ್ತ ಕನಕದಾಸ ಚಿತ್ರಗಳ ನಂತರ ಯಾವುದೇ ಹರಿದಾಸರ ಚಿತ್ರಗಳು ಬಂದಿಲ್ಲ ಎಂದು ಮಾತನಾಡಿದ ನಿರ್ಮಾಪಕ ಹಾಗೂ ನಟ ತ್ರಿವಿಕ್ರಮ ಜೋಶಿ, ಶ್ರೀ ಮಾತಾಂಬುಜ ಮೂವೀಸ್ ಮೂಲಕ ನಿರ್ಮಾಣವಾಗಿದ್ದ ಶ್ರೀ ಜಗನ್ನಾಥ ದಾಸರು ಚಿತ್ರದ ಮೂಲಕ ನಾನು ಸಹ ನಿರ್ಮಾಪಕನಾಗಿ ಚಿತ್ರರಂಗ ಪ್ರವೇಶಿಸಿದೆ.  ಈಗ ಶ್ರೀ ದಾಸವರೇಣ್ಯ ವಿಜಯದಾಸರು ಚಿತ್ರವನ್ನು ನಮ್ಮ ತಂದೆ - ತಾಯಿಯ ಆಶೀರ್ವಾದದಿಂದ ಎಸ್ ಪಿ ಜೆ ಮೂವೀಸ್ ಮೂಲಕ  ನಿರ್ಮಿಸಿದ್ದೇನೆ. ಮುಂದೆ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಹರಿದಾಸರ ಕುರಿತಾದ ಚಿತ್ರಗಳನ್ನು ನಿರ್ಮಿಸುವ ಆಸೆಯಿದೆ. ನಾನು ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಮಧುಸೂದನ್ ಹವಾಲ್ದಾರ್ ನಿರ್ದೇಶಿಸಿದ್ದಾರೆ. ವಿಜಯಕೃಷ್ಣ ಸಂಗೀತ ನೀಡಿದ್ದಾರೆ. ಈ ಚಿತ್ರದ ಹಾಡುಗಳನ್ನು ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ ಅವರು ಬಿಡುಗಡೆ ಮಾಡಿದ್ದಾರೆ. ಅವರಿಗೆ ಹಾಗೂ ಸಮಾರಂಭಕ್ಕೆ ಆಗಮಿಸಿರುವ ಪ್ರತಿಯೊಬ್ಬ ಗಣ್ಯರಿಗೆ ನನ್ನ ಧನ್ಯವಾದ ಎಂದರು.  

 ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರು ದಾಸವರೇಣ್ಯ ಶ್ರೀ ವಿಜಯದಾಸರು ಚಿತ್ರ ವಿಜಯ ಪತಾಕೆ ಹಾರಿಸಲಿ ಎಂದು ತುಂಬು ಹೃದಯದಿಂದ ಹಾರೈಸಿದರು.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಕೇಂದ್ರ ಸಚಿವ ಶ್ರೀಪ್ರಹ್ಲಾದ ಜೋಶಿ ಅವರಿಂದ ಬಿಡುಗಡೆಯಾಯಿತು "ದಾಸವರೇಣ್ಯ ಶ್ರೀ ವಿಜಯ ದಾಸರು" ಚಿತ್ರದ ಧ್ವನಿಸುರಳಿ - Chitratara.com
Copyright 2009 chitratara.com Reproduction is forbidden unless authorized. All rights reserved.