Chief Editor
Manohar. R (Manu)
Photo Journalist
chitrataramanu@gmail.com
+91 9845549026
ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ: ಕಾರಣ ನಿಗೂಢ
Posted date: 14 Sun, Apr 2024 01:09:49 PM
ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರಾಗಿ ಗುರತಿಸಿಕೊಂಡಿದ್ದ ಉದ್ಯಮಿ ಸೌಂದರ್ಯ ಜಗದೀಶ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಸ್ನೇಹಿತರು, ಅಪ್ಪು ಅಪ್ಪು ಸೇರಿದಂತೆ ಹಲವು ಚಿತ್ರ ನಿರ್ಮಾಣ ಮಾಡಿದ್ದ ಸೌಂದರ್ಯ ಜಗದೀಶ್ ಮಹಾಲಕ್ಷ್ಮಿ ನಿವಾಸದ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ತಕ್ಷಣ ರಾಜಾಜಿನಗರದ ಸುಗಣ ಆಸ್ಪತ್ರೆಗೆ ಸಾಗಿಸಲಾಯೊತಾದರೂ ಆಷ್ಟೊತ್ತಿಗೆ ಮೃತಟ್ಟಿದ್ದರು ಎಂದು ಆಸ್ಪತ್ರೆಯ ವೈದ್ಯರು ಖಚಿತ ಪಡಿಸಿದ್ದಾರೆ.ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರಣ ತಿಳಿದುಬಂದಿಲ್ಲ, ಮೃತ ದೇಹದ ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಸಾಗಿಸಲಾಗುವುದು, ಮರಣೋತ್ತರ ಪರೀಕ್ಷೆ ನಡೆಸಿದ ನಂತರ ನಾಳೆ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿಸಿದ್ಧಾರೆ.
 
ನಿರ್ಮಾಪಕ ಸೌಂದರ್ಯ ಜಗದೀಶ್ ಸಾವಿಗೆ ಚಿತ್ರರಂಗದ ಅನೇಕ ಮಂದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಅಪಾರ ಸ್ನೇಹಿತರು, ಬಂಧು ಬಳಗ ಹೊಂದಿದ್ದರು

ಸಿನಿಮಾ ನಿರ್ಮಾಣ ಸೇರಿದಂತೆ ಬೇರೆ ಬೇರೆ ಉದ್ಯಮಗಳಲ್ಲಿ ಸೌಂದರ್ಯ ಜಗದೀಶ್ ತೊಡಗಿಸಿಕೊಂಡಿದ್ದರು. ಬೆಳಗ್ಗೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕುಟುಂಬದ ಸದಸ್ಯರಲ್ಲಿ ಬರಸಿಡಿಲು ಬಡಿದಂತಾಗಿದೆ

ತೀರಾ ಇತ್ತೀಚೆಗೆ ಪುತ್ರಿಯ ವಿವಾಹವನ್ನು ಸೌಂದರ್ಯ ಜಗದೀಶ್ ಅದ್ದೂರಿಯಾಗಿ ಮಾಡಿದ್ದರು. ಜೊತೆಗೆ ಪುತ್ರನಿಗೆ ಹಲವು ಸಿನಿಮಾ ನಿರ್ಮಾಣ ಮಾಡುವ ಜೊತೆಗೆ ಸಿನಿಮಾ ಮಂದಿಯಲ್ಲಿ ಉತ್ತಮ ಸ್ನೇಹ ಬಾಂಧವ್ಯ ಹೊಂದಿದ್ದರು
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ: ಕಾರಣ ನಿಗೂಢ - Chitratara.com
Copyright 2009 chitratara.com Reproduction is forbidden unless authorized. All rights reserved.