ಸಂಗಮ ಫ಼ಿಲಂಸ್ ಲಾಂಛನದಲ್ಲಿ ಎಸ್.ವಿ.ಶಿವಕುಮಾರ್ ಅವರು ನಿರ್ಮಿಸುತ್ತಿರುವ ‘ಕಿಲಾಡಿ ಕಿಟ್ಟಿ ಚಿತ್ರಕ್ಕೆ ಬಾಲಾಜಿ ಡಿಜಿಟಲ್ ಸ್ಟುಡಿಯೋದಲ್ಲಿ ರೀರೆಕಾರ್ಡಿಂಗ್ ಪೂರ್ಣವಾಗಿದೆ. ಸದ್ಯದಲ್ಲೇ ಚಿತ್ರದ ಪ್ರಥಮಪ್ರತಿ ಹೊರಬರಲಿದೆ.
ಅನಂತರಾಜು ನಿರ್ದೇಶನದ ಈ ಚಿತ್ರದ ಹಾಡುಗಳ ಧ್ವನಿಸುರುಳಿ ಖ್ಯಾತ ಕ್ರೀಡಾಪಟು ಕ್ರಿಸ್ಗೇಲ್ ಅವರಿಂದ ಬಿಡುಗಡೆಯಾಯಿತು. ಚಿತ್ರದ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ದೊರೆಕಿದೆ ಎನ್ನುತ್ತಾರೆ ನಿರ್ಮಾಪಕರು.
ರವಿಕುಮಾರ್ ಸಾನಾರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಜೆಸಿಗಿಫ಼್ಟ್ ಸಂಗೀತ ನೀಡಿದ್ದಾರೆ. ಜೋ.ನಿ.ಹರ್ಷ ಸಂಕಲನ, ಮಾಸ್ ಮಾದಾ ಸಾಹಸ ನಿರ್ದೇಶನ ಹಾಗೂ ಹೊಸ್ಮನೆ ಮೂರ್ತಿ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಶ್ರೀನಗರ ಕಿಟ್ಟಿ, ಹರಿಪ್ರಿಯ, ಸ್ಮಿತಾ(ನಿವೇದಿತಾ), ಮಾನ್ಸಿ, ಶರಣ್, ದಿಲೀಪ್, ಆನಂದ್, ಸತ್ಯಜಿತ್, ಸಂಗೀತ, ಮುಖ್ಯಮಂತ್ರಿ ಚಂದ್ರು, ರಂಗಾಯಣ ರಘು, ಬಿ.ಜಯಮ್ಮ, ವೀಣಾಸುಂದರ್, ರಮೇಶ್ ಪಂಡಿತ್, ಬ್ರಹ್ಮಾವರ್, ವಿ.ಮನೋಹರ್ ಮುಂತಾದವರಿದ್ದಾರೆ.