Chief Editor
Manohar. R (Manu)
Photo Journalist
chitrataramanu@gmail.com
+91 9845549026
ಮೈಸೂರು ಲ್ಯಾಂಪ್ಸ್‌ನಲ್ಲಿ ?ಕೃಷ್ಣ s\o ಸಿ ಎಂ
Posted date: 27 Wed, Jun 2012 ? 09:07:43 AM

ಅಜೇಯ್‌ರಾವ್ ಅಭಿನಯದ ‘ಕೃಷ್ಣ s\o ಸಿಎಂ ಚಿತ್ರಕ್ಕಾಗಿ ಕವಿರಾಜ್ ಬರೆದಿರುವ ‘ದಂ ಇದೋನೇ ದಾದಾ ಈ ದುನಿಯಾದಲ್ಲಿ ಎಂಬ ಗೀತೆಯ ಚಿತ್ರೀಕರಣ ಮೈಸೂರು ಲ್ಯಾಂಪ್ಸ್‌ನಲ್ಲಿ ನಡೆಯಿತು. ಮುರಳಿ ನೃತ್ಯ ನಿರ್ದೇಶನ ಮಾಡಿದ ಈ ಹಾಡಿಗೆ ನಾಯಕ ಅಜೇಯ್ ನರ್ತಕರೊಂದಿಗೆ ಹೆಜ್ಜೆ ಹಾಕಿದರು.
      ಸರಸ್ವತಿ ಎಂಟರ್ ಟೈನರ್ ಲಾಂಛನದಲ್ಲಿ ಯೋಗೀಶ್ ಹುಣಸೂರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಖ್ಯಾತ ನಿರ್ದೇಶಕ ಎಂ.ಎಸ್.ರಮೇಶ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ. ದಾಸರಿ ಸೀನು ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಡಿಫ಼ರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನವಿದೆ.
      ‘ಕೃಷ್ಣನ್ ಲವ್ ಸ್ಟೋರಿ, ‘ಕೃಷ್ಣನ್ ಮ್ಯಾರೇಜ್ ಸ್ಟೋರಿ ಚಿತ್ರಗಳ ನಂತರ  ‘ಕೃಷ್ಣ s\o ಸಿಎಂಆಗಿ ಅಜೇಯ್‌ರಾವ್ ಬರುತ್ತಿದ್ದಾರೆ. ವೈದ್ಯೆ ಭಾರತಿ ನಾಯಕಿಯಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ಶೊಭರಾಜ್, ಭವ್ಯ, ಅವಿನಾಶ್, ಮಾಲತಿಸರ್‌ದೇಶಪಾಂಡೆ, ಸ್ವಯಂವರ ಚಂದ್ರು ಮುಂತಾದವರ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಮೈಸೂರು ಲ್ಯಾಂಪ್ಸ್‌ನಲ್ಲಿ ?ಕೃಷ್ಣ s\o ಸಿ ಎಂ - Chitratara.com
Copyright 2009 chitratara.com Reproduction is forbidden unless authorized. All rights reserved.