Chief Editor
Manohar. R (Manu)
Photo Journalist
chitrataramanu@gmail.com
+91 9845549026
``ಕರ್ಮಣ್ಯೇವಾಧಿಕಾರಸ್ತೇ`` ಸೆಪ್ಟೆಂಬರ್ ನಲ್ಲಿ ತೆರೆಗೆ
Posted date: 01 Wed, Sep 2021 12:38:15 PM
ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳುವ ಮಾತು `ಕರ್ಮಣ್ಯೇವಾಧಿಕಾರಸ್ತೇ`` ಎಂದು ಆರಂಭವಾಗುತ್ತದೆ.
ಈ ವಾಕ್ಯವೇ ಚಿತ್ರದ ಶೀರ್ಷಿಕೆಯಾಗಿದೆ. ಸೆಪ್ಟೆಂಬರ್ 24  ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ಅದಕ್ಕಿಂತ ಮುಂಚೆ  ಸೆಪ್ಟೆಂಬರ್ ಆರಂಭದಲ್ಲಿ ಚಿತ್ರದ ಟ್ರೇಲರ್ ಬರಲಿದೆ.

ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಶ್ರೀಹರಿ‌ ಆನಂದ್ ನಿರ್ದೇಶಿಸಿದ್ದಾರೆ.
ನಲವತ್ತೈದು ದಿನಗಳ ಚಿತ್ರೀಕರಣ ನಡೆದಿದ್ದು, ಅತೀ ಹೆಚ್ಚಿನ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆದಿದೆ. ಹಾಡುಗಳು ತೀರ್ಥಹಳ್ಳಿ, ಆಗುಂಬೆ, ಸಾಗರದ ಸುತ್ತಮುತ್ತ ಹಾಗೂ ಕಾಡಿನ ಭಾಗ ದಾಂಡೇಲಿಯಲ್ಲಿ ಚಿತ್ರೀಕರಣಗೊಂಡಿದೆ.

 ಅಮೇರಿಕಾದಲ್ಲಿ ಖ್ಯಾತ ವೈದ್ಯರಾಗಿರುವ ರಮೇಶ್ ರಾಮಯ್ಯ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.
ಎರಡು ಹಾಡುಗಳಿದ್ದು ರಿತ್ವಿಕ್ ಮುರಳಿಧರ್ ಸಂಗೀತ ನೀಡಿದ್ದಾರೆ. ಸಂಚಿತ್ ಹೆಗ್ಡೆ, ಅಶ್ವಿನಿ, ರಿತ್ವಿಕ್ ಮುರಳೀಧರ್, ಅನನ್ಯ ಭಟ್ ಹಾಡುಗಳನ್ನು ಸುಶ್ರಾವ್ಯವಾಗಿ ಹಾಡಿದ್ದಾರೆ.
ಮೂರು ಸಾಹಸ ಸನ್ನಿವೇಶಗಳಿಗೆ ಮಾಸ್ ಅಶೋಕ್ ಸಾಹಸ ನಿರ್ದೇಶನ ಮಾಡಿದ್ದಾರೆ.

ಉದಯಲೀಲ ಛಾಯಾಗ್ರಹಣ ಹಾಗೂ ವಿಜೇತ್ ಚಂದ್ರ ಸಂಕಲನ ಈ ಚಿತ್ರಕ್ಕಿದೆ.

ಪ್ರತೀಕ್ ಸುಬ್ರಮಣಿ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ದಿವ್ಯ ಹಾಗೂ ನೇಪಾಳದ ಡೋಲ್ಮ ನಾಯಕಿಯರು. ನಾಟ್ಯ ರಂಗ, ಉಗ್ರಂ ಮಂಜು, ನಟನ ಪ್ರಶಾಂತ್ ಈ ಚಿತ್ರದಲ್ಲಿ ಅಭಿನಯಿಸಿರುವ ಕಲಾವಿದರು.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ``ಕರ್ಮಣ್ಯೇವಾಧಿಕಾರಸ್ತೇ`` ಸೆಪ್ಟೆಂಬರ್ ನಲ್ಲಿ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.